Tuesday, September 7, 2010

ಆಳ್ವಾಸ್ ನುಡಿಸಿರಿ ೨೦೧೦

ಮೂಡಬಿದ್ರೆ, ಆ.31: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2010’ ಅಕ್ಟೋಬರ್ 29, 30 ಮತ್ತು 31ರಂದು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದು 7ನೆ ವರ್ಷದ ಸಮ್ಮೇಳನವಾಗಿದ್ದು, ಇದರಲ್ಲಿ ನಾಡಿನ ಖ್ಯಾತ ಸಾಹಿತಿಗಳು, ಕವಿಗಳು, ಕತೆ ಗಾರರು ಭಾಗವಹಿಸಲಿದ್ದಾರೆ. ಅ.29ರಂದು ಬೆಳಗ್ಗೆ ನುಡಿಸಿರಿ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಅ.31ರಂದು ಸಂಜೆ ನಡೆ ಯಲಿರುವ ಸಮಾರೋಪ ಸಮಾರಂಭದಲ್ಲಿ ನಾಡಿನ ಗಣ್ಯರನ್ನು ‘ನುಡಿಸಿರಿ ಪ್ರಶಸ್ತಿ’ ನೀಡಿ ಪುರಸ್ಕರಿಸಲಾಗುವುದು ಎಂದು ಡಾ.ಮೋಹನ್ ಆಳ್ವ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪನ್ಯಾಸಕ ಹರೀಶ್ ಕೆ. ಆದೂರು ಉಪಸ್ಥಿತರಿದ್ದರು

No comments: