ನ. 11ರಿಂದ ಮೂಡಬಿದ್ರೆಯಲ್ಲಿ ‘ಆಳ್ವಾಸ್ ನುಡಿಸಿರಿ’
ಸೋಮವಾರ - ಸೆಪ್ಟೆಂಬರ್ -19-2011
ಮೂಡಬಿದ್ರೆ, ಸೆ 18: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಆಶ್ರಯದಲ್ಲಿ ಎಂಟನೆ ವರ್ಷದ ‘ಆಳ್ವಾಸ್ ನುಡಿಸಿರಿ’ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ನವೆಂಬರ್ 11, 12 ಮತ್ತು 13ರಂದು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಕ್ಯಾಂಪಸ್ನಲ್ಲಿ ಹಲವು ವೈಶಿಷ್ಟ್ಯಗಳೊಂದಿಗೆ, ಶಿಸ್ತುಬದ್ಧ ರೀತಿಯಲ್ಲಿ ನಡೆಯ ಲಿದೆ. ಇದಕ್ಕಾಗಿ ಭರದ ಸಿದ್ಧತೆಗಳು ಪ್ರಾರಂಭವಾಗಿವೆ ಎಂದು ಆಳ್ವಾಸ್ ನುಡಿಸಿರಿ ರೂವಾರಿ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ರಾಜ್ಯದ ಆಯ್ದ ಪ್ರದೇಶಗಳಲ್ಲಿ ಈ ಸಮಾಲೋಚನಾ ಸಭೆ ನಡೆಸಲು ಉದ್ದೇಶಿಸಲಾಗಿದೆ. ನುಡಿಸಿರಿ ಪೂರ್ವಭಾವಿ ಸಮಾಲೋಚನಾ ಸಭೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ನಡೆಸಲು ಆಸಕ್ತ ಕನ್ನಡಾಭಿಮಾನಿಗಳು ಉತ್ಸುಕರಾಗಿದ್ದಲ್ಲಿ ಆಳ್ವಾಸ್ ಸಂಸ್ಥೆಯ ನುಡಿಸಿರಿ ಕಚೇರಿಯನ್ನು ಸಂಪರ್ಕಿಸಬಹುದು.ಸಮಾಲೋಚನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಸಮ್ಮೇಳನಕ್ಕೆ ಸದಸ್ಯರಾಗಿ ಭಾಗವಹಿಸಲು ಉತ್ಸುಕರಾಗಿರುವವರು ಸ್ಥಳದಲ್ಲೇ ಹೆಸರು ನೋಂದಾಯಿಸಿ ಸದಸ್ಯತ್ವ ಪಡೆದುಕೊಳ್ಳಲು ಅವಕಾಶವಿದೆ.
ಜಾಗತಿಕ ಸಮ್ಮೇಳನ:ಹತ್ತನೆ ವರ್ಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವಾಗಿ ಆಯೋಜಿಸಲಾಗುವುದು. ಇದಕ್ಕೆ ಪೂರಕ ಯೋಜನೆ, ಯೋಚನೆಗಳು ಪ್ರಗತಿಯಲ್ಲಿವೆ. ವಿಭಿನ್ನವಾಗಿ ಅತ್ಯಂತ ವೈಭವಯುತವಾಗಿ ಅಷ್ಟೇ ವ್ಯವಸ್ಥಿತವಾಗಿ ಹತ್ತನೆ ವರ್ಷದ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ ಎಂಬ ಆಶಾಭಾವವನ್ನು ಡಾ.ಆಳ್ವ ವ್ಯಕ್ತಪಡಿಸಿದರು.
ಎಲ್ಲ ಜಿಲ್ಲೆಯಿಂದ ಪ್ರತಿನಿಧಿಗಳು: ಈ ಬಾರಿಯ ನುಡಿಸಿರಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಕನ್ನಡಾಸಕ್ತರು ಪ್ರತಿನಿಧಿಗಳಾಗಿ ಭಾಗವಹಿಸಬೇಕೆಂಬ ಆಸೆ ನಮ್ಮದು. ಕಳೆದ ವರ್ಷವೂ ಬಹುತೇಕ ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಕನ್ನಡಿಗರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಆಸೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ನುಡಿಸಿರಿಯ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಯುವ ಮನಸ್ಸು ಪಾಲ್ಗೊಳ್ಳಲಿ: ಯುವ ಮನಸ್ಸುಗಳು ಕನ್ನಡವನ್ನು ಕಟ್ಟುವ ಬೆಳೆಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಯುವ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸಬೇಕಾಗಿದೆ. ಯುವ ಜನತೆಯಲ್ಲಿ ಕನ್ನಡದ ಬಗೆಗಿನ ಆಸಕ್ತಿ ಉಂಟಾದಲ್ಲಿ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಆಳ್ವ ಅಭಿಪ್ರಾಯಪಟ್ಟರು.
Tuesday, September 27, 2011
Subscribe to:
Post Comments (Atom)
No comments:
Post a Comment